ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು.


ಇವರಿಗೆ 34 ವರ್ಷ ವಯಸ್ಸಾಗಿತ್ತು. ಆರ್ಯಾಪು ಪಂಚಾಯತ್ ನ 4ನೇ ವಾರ್ಡಿನ ಕ್ರಿಯಾಶೀಲ ಬಿಜೆಪಿ ಬೆಂಬಲಿತ ಸದಸ್ಯರಾದ ಗಿರೀಶ್ ಗೌಡ ಮರಿಕೆ ಇವರು ಕೆಲ ಸಮಯದಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top