ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಗುರುವಾರ ಪುತ್ತೂರು ಟೌನ್ ಬ್ಯಾಂಕ್ ಸಬಾಭವನದಲ್ಲಿ ನಡೆಯಿತು.

ಶಾಸಕ  ಸಂಜೀವ ಮಠಂದೂರು ಮಾತನಾಡಿ, ಸಂಘಟನೆಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ಪಕ್ಷ ಅಧಿಕಾರದಲ್ಲಿದೆ ಎಂದು ಕೂತಲ್ಲಿಯೇ ಪ್ರಚಾರ ಮಾಡಿದರೆ ಸಾಕಾಗುವುದಿಲ್ಲ. ಪ್ರಚಾರಕ್ಕಾಗಿ ಎಷ್ಟು ಸಮಯ ನೀಡುತ್ತೇವೋ, ಸಂಪರ್ಕ ಸಾಧಿಸುತ್ತೇವೋ, ಎಷ್ಟು ಬಾರಿ ಬೂತ್ ಪ್ರವಾಸ ಕೈಗೊಳ್ಳುತ್ತೇವೆಯೋ ಅಷ್ಟು ಸಂಘಟನೆ ಆಗುತ್ತದೆ. ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ ಎಂದರು.

ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೆರಳೆ, ಜಿಲ್ಲಾ ಉಪಾಧ್ಯಕ್ಷ ಬುಡಿಯೂರ್ ರಾಧಾಕೃಷ್ಣ ಆಳ್ವ, ನಗರ  ಮಂಡಲ ಅಧ್ಯಕ್ಷ ಜಗನಿವಾಸ್  ರಾವ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.





























 
 

ಗೌರಿ ಬನ್ನೂರು ಪ್ರಾರ್ಥಿಸಿ, ಮಂಡಲ ಪ್ರದಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ  ಸ್ವಾಗತಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top