ಮುರುಡೇಶ್ವರ- ಬೆಂಗಳೂರು ರೈಲು ಮೇ ತನಕ ವಿಸ್ತರಣೆ

ಮೂರು ಜಿಲ್ಲೆಗಳ ಜನರಿಗೆ ಅನುಕೂಲ

ಮಂಗಳೂರು: ಪ್ರಯಾಣಿಕರ ಬೇಡಿಕೆಗೆ ಮಣಿದು ರೈಲ್ವೆ ಇಲಾಖೆ ಮುರುಡೇಶ್ವರ- ಬೆಂಗಳೂರು ರೈಲು ಸೇವೆಯನ್ನು 2023ರ ಮೇ ತಿಂಗಳ ಕೊನೆಯ ತನಕ ವಿಸ್ತರಿಸಿ ಆದೇಶ ಹೊರಡಿಸಿದೆ. ಚಳಿಗಾಲದ ಅವಧಿಗಾಗಿ ಜನವರಿ ಅಂತ್ಯದ ತನಕ ಮಾತ್ರ ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ ಮಾಡಲಾಗಿತ್ತು.ಆದರೆ ಈ ರೈಲು ಜನರಿಗೆ ಬಹಳ ಅನುಕೂಲಕರವಾಗಿರುವುದರಿಂದ ವಿಸ್ತರಿಸಲು ಒತ್ತಾಯವಿತ್ತು. ಕರಾವಳಿ ಜನರಿಗೆ ಬೆಂಗಳೂರಿಗೆ ಹೋಗಿ ಬರಲು ಈ ರೈಲು ಅನುಕೂಲಕರವಾಗಿದೆ. ಮೂರು ಜಿಲ್ಲೆಗಳ ಜನರು ಈ ರೈಲಿನ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top