ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ

ಪುತ್ತೂರು: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ರಥಸಪ್ತಮಿ ಅಂಗವಾಗಿ ಜ. 28ರಂದು ಬೆಳಿಗ್ಗೆ 5ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ದೇವಳದ ಮುಖಮಂಟಪದಲ್ಲಿ ಅಖಂಡ ಸೂರ್ಯನಮಸ್ಕಾರ ನಡೆಯಲಿದೆ.

ಕರ್ನಾಟಕ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ನೇತ್ರಾವತಿ ವಲಯದ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಲಿದ್ದಾರೆ. ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯ ಪ್ರಮುಖರು ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಸಂಚಾಲಕ ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top