ಶ್ರೀ ಸವಿತಾ ಮಹರ್ಷಿ ಜಯಂತಿ

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ವತಿಯಿಂದ  ಶ್ರೀ ಸವಿತಾ ಮಹರ್ಷಿ ಜಯಂತಿ ಶನಿವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು‌.

ಪುತ್ತೂರು ಉಪವಿಭಾಗಾಧಿಕಾರಿ  ಗಿರೀಶ್ ನಂದನ್ ಸಂಸ್ಮರಣ ಜ್ಯೋತಿ ಪ್ರಜ್ವಲನೆ ಮಾಡಿ, ಸವಿತಾ ಸಮಾಜದವರು ಯಾವುದೇ ಮತ, ಭೇದವಿಲ್ಲದೆ ಸೇವೆ ಮಾಡುತ್ತಿದ್ದಾರೆ. ಸಮಾಜದ‌ ಶ್ರಿ ಸವಿತಾ ಮಹರ್ಷಿಗಳ ಆದರ್ಶ ಇಂದಿಗೂ ಪ್ರಸ್ತುತ. ಸಮಾಜದವರು ಉತ್ತಮ ಸೇವೆ ಮೂಲಕ ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಲಿ ಎಂದರು.

ಗ್ರೇಡ್ 2 ತಹಶೀಲ್ದಾರ್ ದಯಾನಂದ ಸ್ವಾಗತಿಸಿದರು. ತಾಲೂಕು ಸವಿತಾ ಸಮಾಜದ‌ ಮಾಜಿ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಮುಂದಿನ ವರ್ಷದ ಅಚರಣೆಯನ್ನು ಸಮಾಜದ‌ ವತಿಯಿಂದ ಏರ್ಪಡಿಸುವ ಕುರಿತು ಸಹಾಯಕ ಆಯುಕ್ರರಲ್ಲಿ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು‌ ಉಪಸ್ಥಿತರಿದ್ದರು.  ತಾಲೂಕು ಕಛೆರಿ ಸಿಬ್ಬಂದಿ ವೀಣಾ ಕಾರ್ಯಕ್ರಮ ನಿರೂಪಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top