ವಿಜಯ ಸಂಕಲ್ಪ ಅಭಿಯಾನದ ಮೂಲಕ ಯೋಜನೆಗಳು ಪ್ರತೀ ಮನೆಗೆ ತಲುಪಬೇಕು : ಶಾಸಕ ಸಂಜೀವ ಮಠಂದೂರು

ವಿಟ್ಲ : ಕಮಲ ಕುಟುಂಬ ಮಿಲನ ಮತ್ತು ಕ್ರೀಡೋತ್ಸವ ಜ. 29ರಂದು ವಿಠಲ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರಧಾನಿ ಮೋದಿಯವರ ಯೋಜನೆಗಳು ಪ್ರತೀ ಮನೆಗೆ ತಲುಪಿಸುವ ಕಾರ್ಯ ಆಗಬೇಕು ಎಂದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನಮ್ಮೆಲ್ಲ ಸದಸ್ಯರು ಒಂದೇ ಕುಟುಂಬದವರಂತೆ ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶ ಇಂದಿನ ಕಾರ್ಯಕ್ರಮದಲ್ಲಿ ಸಿಕ್ಕಿದೆ ಎಂದರು.





























 
 

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜಾ ರಾಧಾ ಕೃಷ್ಣ ಅಳ್ವ, ಕಾರ್ಯದರ್ಶಿ ಪುರಷೋತ್ತಮ ಮುಂಗ್ಲಿಮನೆ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ, ದ ಕ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ನಾರಾಯಣ, ಮುಳಿಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಪಕ್ಷದ ಹಿರಿಯರಾದ ನಿತ್ಯಾನಂದ ನಾಯಕ್. ನಿವೃತ್ತ ಉಪ ಪ್ರಾಂಶುಪಾಲ ಸುಬ್ರಮಣ್ಯ ಭಟ್. ಹಿರಿಯ ವಕೀಲರಾದ ಜಯರಾಮ್ ರೈ. ನರ್ಸಪ್ಪ ಪೂಜಾರಿ ನಿಡ್ಯಾ, ಮಹಾಬಲೇಶ್ವರ ಭಟ್ ಅಲಂಗಾರು ಶುಭಹಾರೈಸಿದರು ವಿಟ್ಲ ಬಿಜೆಪಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ಗೌಡ ನಾಯ್ತೋಟು, ಪ್ರಭಾರಿ ಮೋಹನ್ ದಾಸ್ ಉಕ್ಕುಡ. ರಾಮದಾಸ್ ಶೆಣೈ ವಿಟ್ಲ ಜಗದೀಶ್ ಪಣೆಮಜಲು, ಜೀವನ್ ವಿಟ್ಲ . ಶಕ್ತಿ ಕೇಂದ್ರ ಅಧ್ಯಕ್ಷರಾದ ಲೋಕನಾಥ್ ಶೆಟ್ಟಿ ಕೊಲ್ಯ. ವೀರಪ್ಪ ಗೌಡ ರಾಯರ ಬೆಟ್ಟು. ಹರೀಶ್ ಪೂಜಾರಿ ವಿಟ್ಲ, ಸಾಮಾಜಿಕ ಜಾಲತಾಣ ಸಂಚಾಲಕ ಕೃಷ್ಣ ಮುದೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ . ಪಟ್ಟಣ ಪಂ ಸದಸ್ಯರಾದ ರವೀಶ್ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ಜಯಂತ್ ಸಿ ಯಚ್, ವಸಂತ ಪಿ., ಗೋಪಿ ಕೃಷ್ಣ, ವಿಜಯ ಲಕ್ಷ್ಮಿ, ಸಂಗೀತ ಜೆ ಪಿ., ರಕ್ಷಿತಾ ಸನತ್ ಹಾಗೂ ಬಿಜೆಪಿ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top