ಅಮಿತ್ ಶಾ ಆಗಮನ ಹಿನ್ನೆಲೆ: ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಬಿಜೆಪಿ ಜಾಥಾ

ಪುತ್ತೂರು: ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸುತ್ತಿರುವ ಕೇಂದ್ರದ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಗುರುವಾರ ಜಾಥಾ ನಡೆಸಲಾಯಿತು.

ಪುತ್ತೂರು ಬಿಜೆಪಿ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜಾಥಾಕ್ಕೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.

ಬಳಿಕ ದರ್ಬೆಯಿಂದ ಹೊರಟ ಜಾಥಾ, ಪುತ್ತೂರು ಪೇಟೆಯಾಗಿ ಸಾಗಿ ಬೊಳುವಾರಿನಲ್ಲಿ ಸಮಾಪನಗೊಂಡಿತು. ದಾರಿಯುದ್ಧಕ್ಕೂ ಆಸುಪಾಸಿನ ಅಂಗಡಿಗಳಿಗೆ, ಸಾರ್ವಜನಿಕರಿಗೆ ಆಮಂತ್ರಣ ಪತ್ರ ನೀಡಲಾಯಿತು. ಜಾಥಾದ ಮುಂಭಾಗದಿಂದ ಕಾರ್ಯಕ್ರಮದ ವಿವರಣೆಯನ್ನು ನೀಡಲಾಗುತ್ತಿತ್ತು.





























 
 

ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾಗೌರಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top