ನಾಳೆ ರೋಟರಿ ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಶಾಂತ್ ಕಾರಂತ್ ಫೆ. 14ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ರವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಇದೇ ಸಂದರ್ಭ ಉದ್ಘಾಟಿಸಲಿದ್ದಾರೆ.

ಸಂಜೆ ಬಪ್ಪಳಿಗೆ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಎ. ಜಗಜ್ಜೀವನ್ ದಾಸ್ ರೈ, ವಲಯ ಸೇನಾನಿ ಹರ್ಷಕುಮಾರ್ ರೈ ಉಪಸ್ಥಿತರಿರಲಿದ್ದಾರೆ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಮೊಹಮದ್ ರಫೀಕ್ ದರ್ಬೆ, ಕಾರ್ಯದರ್ಶಿ ಚಂದ್ರಹಾಸ ರೈ ಬಿ. ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top