ಬ್ಯಾಂಕ್‌ಗೆ ವಂಚನೆ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು : ಕಬಕ ಬ್ಯಾಂಕ್ ಒಂದಕ್ಕೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯೊಬ್ಬನ್ನು ಪುತ್ತೂರು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬರ ಪುತ್ರ ಮೊಹಮ್ಮದ್ ಅನ್ವರ್ ಬಂಧಿತ ಆರೋಪಿ. 2017 ರಲ್ಲಿ ಮೊಹಮ್ಮದ್ ಅನ್ವರ್ ಕಬಕದ ಬ್ಯಾಂಕ್ ಒಂದರಲ್ಲಿ ಸಾಲಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆಗೊಳಗಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಅರೋಪಿ ವಿರುದ್ಧ ವಾರಂಟ್ ಮಾಡಿತ್ತು. ಇದೀಗ ಪೊಲೀಸರು ಶುಕ್ರವಾರ ಆರೋಪಿಯನ್ನು ವಿಟ್ಲದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top