ಪಕ್ಷ ಚಟುವಟಿಕೆಯಲ್ಲೇ ತೃಪ್ತಿ ಕಂಡಿರುವ ಬಿಜೆಪಿ ದ.ಕ. ಜಿಲ್ಲಾಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ

ಪುತ್ತೂರು: ಎಂದೂ ಅಧಿಕಾರಕ್ಕೆ ಬಯಸದೇ, ಸದಾ ಪಕ್ಷ ಚಟುವಟಿಕೆಯಲ್ಲೇ ಸಕ್ರೀಯವಾಗಿ ತೊಡಗಿಸಿಕೊಂಡ ನಾಯಕ ಬೂಡಿಯಾರ್ ರಾಧಾಕೃಷ್ಣ ರೈ.

ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ, ಕೆಎಂಎಫ್, ಮ್ಯಾಮ್ಕೋಸ್ ನಿರ್ದೇಶಕರಾಗಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಾಗಿ, ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿರುವ ಬೂಡಿಯಾರ್ ರಾಧಾಕೃಷ್ಣ ರೈ ಅವರು, ಇದೀಗ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ.

ಕುರಿಯ ಗ್ರಾಮದ ಬೂಡಿಯಾರಿನಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ, ಸಾಮಾಜಿಕ ಚಟುವಟಿಕೆಯಲ್ಲೂ ಗುರುತಿಸಿಕೊಂಡಿದ್ದಾರೆ. ಇದರ ನಡುವೆ ಬಿಜೆಪಿಯನ್ನೇ ಉಸಿರಾಗಿಸಿಕೊಂಡು, ಪಕ್ಷದ ಕೆಲಸಗಳನ್ನು ಸದ್ದಿಲ್ಲದೇ ಮಾಡುತ್ತಿದ್ದಾರೆ. ತಳಮಟ್ಟದಿಂದ ನಾಯಕನವರೆಗೆ ಎಲ್ಲಾ ಮಜಲುಗಳನ್ನು ಹತ್ತಿರದಿಂದ ಕಂಡವರು. ಆದ್ದರಿಂದಲೇ ನಾಯಕರು ಹಾಗೂ ಕಾರ್ಯಕರ್ತರ ಮನದಾಳವನ್ನು ಸುಲಭವಾಗಿ ಅರ್ಥೈಸಿಕೊಳ್ಳಬಲ್ಲವರು. ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top