ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ

ಚುನಾವಣಾ ತಂತ್ರಗಾರಿಕೆಗೆ ನಾಯಕರ ಜತೆ ಸಮಾಲೋಚನೆ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಮಾಡಿದ ಬೆನ್ನಲ್ಲೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಋಾಜ್ಯಕ್ಕೆ ಬರಲಿರುವ ಶಾ ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ.

ಗುರುವಾರ ಅಮಿತ್‌ ಶಾ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ ಗೆಲುವು ಸಾಧಿಸಲೆಬೇಕು ಎಂದು ಪಣ ತೊಟ್ಟಿರುವ ಬಿಜೆಪಿ, ಹೈಕಮಾಂಡ್ ನಾಯಕರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಮೂಲಕ ವಿಜಯ ಕಹಳೆಗೆ ತಯಾರಿ ನಡೆಸಿದೆ.

ಸಾವರ್ಜನಿಕ ಸಮಾವೇಶ ಮುಗಿದ ಬಳಿಕ ಶಿವಪುರ ಪ್ಯಾಲೇಸ್‌ನಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಚುನಾವಣಾ ತಂತ್ರಗಾರಿಕೆ, ಸರ್ಕಾರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ, ಟಿಕೆಟ್ ವಿಚಾರದಲ್ಲಿನ ಗೊಂದಲ ಸೇರಿದಂತೆ ಹಲವು ವಿಚಾರಗಳನ್ನ ಚರ್ಚೆ ನಡೆಸಲಿದ್ದಾರೆ





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top