ಅಮಿತ್ ಶಾ ಭೇಟಿ: ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಅಮಿತ್ ಶಾ ಅವರು ಪುತ್ತೂರಿಗೆ ಭೇಟಿ ಸಮಾರಂಭ ಯಶಸ್ವಿಯಾದ ಹಿನ್ನೆಲೆಯಲ್ಲಿ ಫೆ. 28ರಂದು ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಸಾಮಾನ್ಯ ಕಾರ್ಯಕರ್ತರ ಶ್ರಮದಿಂದ ಅಮಿತ್ ಶಾ ಭೇಟಿ ಸಮಾರಂಭ ಯಶಸ್ವಿಯಾಗಿ ನಡೆದಿದೆ. ನೀರು, ಮಜ್ಜಿಗೆ, ಊಟ ನೀಡುವಲ್ಲಿಂದ ಹಿಡಿದು, ಸಮಾರಂಭದವರೆಗೂ ಪ್ರತಿಯೊಂದು ಅಚ್ಚುಕಟ್ಟಾಗಿ ನಡೆದಿದೆ. ಬಹಳ ದೊಡ್ಡ ಸಮಾರಂಭ ಶಿಸ್ತುಬದ್ಧವಾಗಿ ನಡೆದಿದ್ದು, ಸಹಕರಿಸಿದ ಪ್ರತಿಯೊಬ್ಬರಿಗೂ ದನ್ಯವಾದ ಸಲ್ಲಿಸಿದರು.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ, ಕ್ಯಾಂಪ್ಕೋದ ಕಾರ್ಯಕ್ರಮವಾದರೂ, ಇದೊಂದು ಸಾರ್ವಜನಿಕ ಸಮಾವೇಶದ ರೀತಿಯಲ್ಲಿ ನಡೆದಿದೆ. ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರತಿಯೊಬ್ಬರ ಪಾಲು ಇದ್ದು, ಸಹಕರಿಸಿದ ಪ್ರತಿಯೊಬ್ಬರಿಗೂ ದನ್ಯವಾದ. ವಿಶೇಷವಾಗಿ, ಭಾರತೀಯ ಜನತಾ ಪಾರ್ಟಿಯ ಎಲ್ಲಾ ಕಾರ್ಯಕರ್ತರಿಗೆ ದನ್ಯವಾದ ಎಂದರು.





























 
 

ಗೋಪಾಲಕೃಷ್ಣ ಹೇರಳೆ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರು ಒಟ್ಟು ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಶಾಸಕ ಸಂಜೀವ ಮಠಂದೂರು, ರವೀಂದ್ರ ರೈ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top