ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ

ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು.

ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್‌ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು, ಸಾರೆ ಜಹಾಂಸೆ ಅಚ್ಚಾ, ಕ್ವಿಟ್ ಇಂಡಿಯಾ ಮುಂತಾದ ನಾಮಾಂಕಿತವನ್ನು ನೀಡಿದ್ದು ಮುಸ್ಲಿಮರು. ಇಂತಹಾ ಮುಸ್ಲಿಮರು ಆರಾಧಿಸುವ ಅಲ್ಲಾಹುವಿನ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿಯ ಈಶ್ವರಪ್ಪ ಅವರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಅವರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸುವಂತೆ ಒತ್ತಾಯಿಸಿದರು.





























ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬಯ ಮಾತನಾಡಿ, ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ದೊಂಬಿ ಗಲಭೆಗಳು ಜಾಸ್ತಿಯಾಗಿದೆ. ಇದನ್ನು ಕಂಡು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಇದೀಗ ಇಸ್ಲಾಂನ ಪವಿತ್ರ ಆರಾಧಕ ಅಲ್ಲಾಹು ಕುರಿತು ಅವಹೇಳನಕಾರಿಯಾಗಿ ಮಾತನಾಡಿದರೂ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು, ಸಂಘ ಪರಿವಾರವನ್ನು ಓಲೈಸಲು ಅವರ ಪರವಾಗಿ ಮಾತನಾಡಿದ ಯು.ಟಿ.ಖಾದರ್ ಮಾತಿನಲ್ಲಿ ಬಿಗಿ ಹಿಡಿದು ಮಾತಾಡಲಿ ಎಂದು ಎಚ್ಚರಿಕೆ ನೀಡಿದರು.

 
 

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪಕ್ಷದ ಇಬ್ರಾಹಿಂ ಸಾಗರ, ಅಬ್ದುಲ್ ಹಮೀದ್ ಸಾಲ್ಮರ, ಅಶ್ರಫ್, ಶಿರಾಜ್ ಕೂರ್ನಡ್ಕ ಪಾಲ್ಗೊಂಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top