ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ.

ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top