ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರು: ಹಿಮಂತ್‌ ಬಿಸ್ವಾ ಶರ್ಮ ಟೀಕೆ

ನವ ಭಾರತಕ್ಕೆ ಮದರಸ ಶಿಕ್ಷಣದ ಅಗತ್ಯವಿಲ್ಲ

ಬೆಳಗಾವಿ : ಕಾಂಗ್ರೆಸಿಗರು ಬಾಬರಿ ಮಸೀದಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ, ರಾಮಮಂದಿರದ ಬಗ್ಗೆ ಮಾತನಾಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರಿಗೆ ಜನರು ತಕ್ಕ ಪಾಠ ಕಲಿಸಬೇಕು, ಅವರನ್ನು ದೇಶದಿಂದ ಕಿತ್ತೊಗೆಯುವ ಅಗತ್ಯವಿದೆ.
ಅಸ್ಸಾಂ ಸೇರಿದಂತೆ ಇಡೀ ಉತ್ತರ ಭಾರತ ಎಂದೂ ಔರಂಗಜೇಬನ ಆಡಳಿತದ ಹಿಡಿತಕ್ಕೆ ಸಿಕ್ಕಿರಲಿಲ್ಲ. ಆದರೂ, ಕಮ್ಯುನಿಸ್ಟ್‌ ಸಾಹಿತಿಗಳು ಇಡೀ ಭಾರತ ಔರಂಗಜೇಬನ ಅಧೀನದಲ್ಲಿತ್ತು ಎಂದು ತಿರುಚಿದ ಇತಿಹಾಸ ಸೃಷ್ಟಿಸಿ ಹೋಗಿದ್ದಾರೆ. ಆದರೆ ಅವರು ಬಹಿರಂಗಪಡಿಸದ ವಿಷಯವೆಂದರೆ ಶಿವಾಜಿ ಮಹಾರಾಜರು ಔರಂಗಜೇಬ್‌ನಿಗಿಂತ 10 ಪಟ್ಟು ಹೆಚ್ಚು ಸಮರ್ಥ ಯೋಧನಾಗಿದ್ದರು ಎಂದು ಅವರು ಹೇಳಿದರು.
ನವ ಭಾರತಕ್ಕೆ ಮದರಸಗಳ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಅಸ್ಸಾಂನ ಎಲ್ಲ ಮದರಸಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮದರಸ ಶಿಕ್ಷಣಕ್ಕೆ ಬ್ರೇಕ್‌ ಹಾಕಲು ಅಸ್ಸಾಂ ಸರ್ಕಾರ ಮುಂದಾಗಿದೆ ಎಂದು ಹೇಳಿದರು. ನಮ್ಮ ಸರ್ಕಾರ ಈಗಾಗಲೇ ಅಸ್ಸಾಂನಲ್ಲಿ 600 ಮದರಸಾಗಳನ್ನು ಮುಚ್ಚಿದೆ. ಶೀಘ್ರದಲ್ಲೇ ಉಳಿದ ಮದರಸಗಳನ್ನೂ ಮುಚ್ಚುವ ಯೋಜನೆಯನ್ನು ಜಾರಿಗೆ ತರಲಿದೆ. ನಮಗೆ ಮದರಸಗಳ ಅಗತ್ಯವಿಲ್ಲ. ನಮಗೆ ಇಂಜಿನಿಯರ್‌ಗಳು ಮತ್ತು ವೈದ್ಯರು ಬೇಕು ಎಂದು ಹೇಳಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top