ಮಂಗಳೂರು : ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.
ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.
ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು
