ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ

ಪುತ್ತೂರು: ಸ್ಮಾರ್ಟ್ ಬೋರ್ಡ್‌ಗಳ ಮೂಲಕ ತರಗತಿಗಳು ನಡೆದಾಗ ದೃಶ್ಯ ಮಾಧ್ಯಮದೊಂದಿಗೆ ವಿದ್ಯಾರ್ಥಿಗಳು ವಿಷಯಗಳನ್ನು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳಬಹುದು. ತನ್ಮೂಲಕ ಜ್ಞಾನ ವೃದ್ಧಿಯ ಸಾಧ್ಯತೆಗಳನ್ನು ವಿಸ್ತರಿಸಿಕೊಂಡು ಕಲಿಕಾ ಕ್ಷೇತ್ರದಲ್ಲಿ ಪರಿಣತಿ ಪಡೆದು ಯಶಸ್ಸು ಪಡೆಯಬಹುದು ಎಂದು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಅಭಿಲಾಷ್ ಹೇಳಿದರು.

ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸುಮಾರು ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿ ವೆಚ್ಚದಲ್ಲಿ ನೂತನವಾಗಿ ಅಳವಡಿಸಲಾಗಿರುವ ಇಂಟರ್‍ಯಾಕ್ಟಿವ್ ಸ್ಮಾರ್ಟ್ ಬೋರ್ಡ್ ನ್ನು ಉದ್ಘಾಟಿಸಿ ಮಾತನಾಡಿದರು.

ದಶಕದ ಹಿಂದಿನವರೆಗೂ ಶಾಲಾ ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಬೋರ್ಡ್‌ನಂತಹ ಸಾಧ್ಯತೆಗಳು ಇರುತ್ತಿರಲಿಲ್ಲ. ಆದರೆ ಈಗಿನ ವಿದ್ಯಾರ್ಥಿಗಳಿಗೆ ಆಧುನಿಕ ಉಪಕರಣಗಳ ಮೂಲಕ ಸೊಗಸಾದಪಾಠ ಪ್ರವಚನಗಳು ದೊರಕುವಂತಾಗಿವೆ. ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರಲ್ಲದೆ ನಿರಂತರ ಶ್ರಮವಹಿಸಿದರೆ ಪ್ರತಿಯೊಬ್ಬನೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಗೊಂಡು ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಳ್ಳಬಹುದು ಎಂದರು.





























 
 

ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಹಂತ ದಾಟುವ ಮೊದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕಲೆ ಕರಗತ ಮಾಡಿಕೊಳ್ಳಬೇಕು. ಅದಕ್ಕಾಗಿ ಹೆಚ್ಚಿನ ಪಠ್ಯ ಸಾಧ್ಯತೆಗಳು ವಿದ್ಯಾಥಿಗಳಿಗೆ ದೊರಕಬೇಕು. ಆ ನಿಟ್ಟಿನಲ್ಲಿ ಅಂಬಿಕಾ ಮಹಾವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಸುವ ಕಾರ್ಯ ನಡೆದಿದೆ. ಕಲಿಕೆಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಸಂಸ್ಥೆಯ ಗುರಿ. ಆಧುನಿಕತೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಬ್ಬರೂ ತೆರೆದುಕೊಂಡು ಕಾರ್ಯನಿರ್ವಹಿಸಿದಾಗ ಪ್ರಯೋಜನ ದೊರೆಯಲು ಸಾಧ್ಯ ಎಂದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮಹಿಮಾ ಹೆಗಡೆ ಹಾಗೂ ಅಂಕಿತಾ ಪ್ರಾರ್ಥಿಸಿದರು. ಪ್ರಾಂಶುಪಾಲ ರಾಕೇಶ್ ಕುಮಾರ್ ಕಮ್ಮಜೆ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ವಂದಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top