ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ?

ಪುತ್ತೂರು: ಬುಧವಾರ ಸಂಜೆ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು.

ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ಹೊರಗೆಡವಿದರು. ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ? ಬೆಲೆ ಇಲ್ಲ ಎಂದಾದರೆ ನೀವು ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಜೀವ ಮಠಂದೂರು ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಈಗ ಅವರನ್ನು ಕಡೆಗಣಿಸುವುದು ಎಂದಾದರೆ, ಇದರ ಅರ್ಥವೇನು? ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆಯೇ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸವೇ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದು ತಮ್ಮ ಅಸಹನೆ ಹೊರಗೆಡವಿದರು.





























 
 

ಪುತ್ತೂರು ಬಿಜೆಪಿಯ ಕಾರ್ಯಕರ್ತರೆಂದರೆ ಒಂದು ಕುಟುಂಬದಂತಿದ್ದೇವೆ. ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ವರಿಷ್ಠರು ಪ್ರಾಮಾಣಿಕರನ್ನು ಕಡೆಗಣಿಸುವುದಾದರೆ, ನಾವು ಕೆಲಸ ಮಾಡುವುದಾದರೂ ಯಾಕಾಗಿ. ಇದುವರೆಗೆ ಭೇಟಿ ನೀಡದವರು ಈಗ ಯಾಕಾಗಿ ಭೇಟಿ ನೀಡುವುದು ಎಂದು ಪ್ರಶ್ನಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top