ಉಕ್ರೇನ್‌ಗೆ ಹೆಚ್ಚುವರಿ ನೆರವು ನೀಡುವಂತೆ ಕೋರಿ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿಗೆ ಪತ್ರ

ದೆಹಲಿ : ರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್‌ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಈ ಇಬ್ಬರು ನಾಯಕಿಯರು ಅಭಿಪ್ರಾಯಗಳನ್ನು ಹಂಚಿಕೊಂಡರು. ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವ ಭರವಸೆಯನ್ನು ಕೊಡಲಾಗಿದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದರೆ, ಈ ಭೇಟಿ ‘ಫಲಪ್ರದವಾಗಿದೆ’ ಎಂದು ಜಪರೊವಾ ಹೇಳಿದ್ದಾರೆ.

ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಎಮಿನಿ ಝಪರೋವಾ ಅವರು ಭಾರತದಲ್ಲಿ ಇರುವ ಸಮಯದಲ್ಲಿ ಅವರು ಈ ಪತ್ರವನ್ನು ಬರೆದಿದ್ದಾರೆ. ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳು ಸೇರಿದಂತೆ ಹೆಚ್ಚುವರಿ ಮೂಲಭೂತ ಅಗತ್ಯಗಳನ್ನು ಪೂರೈಸುವಂತೆ ಉಕ್ರೇನ್ ವಿನಂತಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿ ಈಗಾಗಲೇ ಬರೋಬ್ಬರಿ 1 ವರ್ಷ ಕಳೆದಿದೆ. ಕೆಲವೇ ವಾರದಲ್ಲಿ ಯುದ್ಧ ಮುಗಿಯಲಿದೆ ಎಂಬ ವಿಶ್ವಾಸದಲ್ಲಿದ್ದ ಜಗತ್ತಿಗೆ ಇದು ಬೇಸರ ತರಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ತಿಕ್ಕಾಟ ಹೆಚ್ಚಾದಷ್ಟು ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿ ಯುದ್ಧಕ್ಕೆ ಅಂತ್ಯ ಹಾಡಲು ಭಾರತವೂ ಸೇರಿದಂತೆ ಜಗತ್ತಿನ ಬಲಿಷ್ಠ ರಾಷ್ಟ್ರಗಳ ಬಳಿ ಉಕ್ರೇನ್ ಮನವಿ ಮಾಡುತ್ತಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top