ಸಿಇಟಿ, ನೀಟ್ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳ ಜೊತೆಗೆ ಸಂವಾದ

ಪುತ್ತೂರು: ಯಾವುದೇ ಪರೀಕ್ಷೆಎದುರಿಸುವಲ್ಲಿ ಆಸಕ್ತಿಯ ಜೊತೆ ನಿರಂತರ ಅಭ್ಯಾಸ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅರಿತುಕೊಂಡ ವಿಷಯಗಳ ಬಗ್ಗೆ ಪುನರ್ ಮನನ ಮಾಡಿಕೊಳ್ಳುವ ಅಭ್ಯಾಸ ಹೆಚ್ಚಿಸಿಕೊಂಡರೆ ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ವಾಮನ್ ಪೈ ಹೇಳಿದರು.

ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ಸಿಇಟಿ, ನೀಟ್‌ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ನಂಬಿಕೆಗಳ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕು. ಮೌಲ್ಯದ ಬೇರುಗಳು ಗಟ್ಟಿಯಾದಾಗ ಎಲ್ಲಿ ಬೇಕಾದರೂ ಜೀವನ ಕಂಡುಕೊಳ್ಳಬಹುದು. ಬದುಕಿನಯಾವುದೇ ಪರೀಕ್ಷೆಗಳನ್ನು ಎದುರಿಸಬಹುದು.ಎಂದು ಹೇಳಿದರು.





























 
 

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅವರ ಸಂದೇಹಗಳಿಗೆ ಉತ್ತರಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top