ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು

ಪುತ್ತೂರು: ಕಳೆದ 5 ವರ್ಷದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ನಿರಂತರ ಶ್ರಮ ವಹಿಸಿದ್ದೇನೆ. ಆದರೂ ಸಿಟ್ಟಿಂಗ್ ಎಂ.ಎಲ್.ಎ. ಆಗಿದ್ದು, ನನಗೆ ಅವಕಾಶ ಸಿಗಲಿಲ್ಲ ಎಂಬ ವಿಚಾರಕ್ಕೆ ಬೇಸರ ಇದೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರು ಬೆಂಬಲ ಸೂಚಿಸಿದ್ದಾರೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಸಂಘಟನೆಗೆ ಅವರೆಲ್ಲಾ ನನ್ನ ಜೊತೆ ನಿಂತಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಪಕ್ಷದ ತೀರ್ಮಾನ ಬೇಸರ ತಂದಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ತನ್ನನ್ನು ಭೇಟಿ ಮಾಡಿದ್ದಾರೆ. ಒಟ್ಟಾಗಿ ಕೆಲಸ ಮಾಡುವ ಎಂದು ತಿಳಿಸಿದ್ದಾರೆ. ಅವರಲ್ಲಿಯೂ ನನ್ನ ಅಸಮಾಧಾನವನ್ನು ತಿಳಿಸಿದ್ದೇನೆ. ಹಾಗೆಂದು, ಪಕ್ಷ ಕೈಗೊಂಡ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷ ಆಯ್ಕೆ ಮಾಡಿರುವ ಮುಂದಿನ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡಿ, ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top