ಜನರ ಸಮಸ್ಯೆಗಳಿಗೆ ಸ್ಪಂದನೆಯ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸವಾಗುವಂತೆ ನೋಡಿಕೊಳ್ಳುವೆ – ಭಾಗೀರಥಿ ಮುರುಳ್ಯ

ಸುಳ್ಯ: ನಾನು ಶಾಸಕಿಯಾಗಿ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಇಲಾಖೆಗಳಲ್ಲಿ ಲಂಚ ರಹಿತ ಕೆಲಸ ಕಾರ್ಯಗಳು ನಡೆಯುವಂತೆ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಅವರು ಶುಕ್ರವಾರ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ಪಕ್ಷ ಮತ್ತು ಸಂಘಟನೆ ಈ ಅವಕಾಶ ನೀಡಿದೆ. ಎಲ್ಲರ ಆಶೀರ್ವಾದದಿಂದ ಸುಳ್ಯದಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹೇಳಿದ ಅವರು, ನಾನು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮೊದಲ ಆದ್ಯತೆ ನೀಡುವೆ ಎಂದು ಹೇಳಿದರು.

ಮೂಲಭೂತ ಅವಶ್ಯಕತೆಗೆ ಆದ್ಯತೆ ನೀಡುವ ಜತೆಗೆ ಸರಕಾರಿ ಇಲಾಖೆಯನ್ನು ಲಂಚಮುಕ್ತಗೊಳಿಸಿ ಜನಸಾಮಾನ್ಯರ ಕೆಲಸಗಳು ನಡೆಯುವಂತೆ ನೋಡಿಕೊಳ್ಳುವೇ. ಈ ನಿಟ್ಟಿನಲ್ಲಿ ಜಾಗೃತಿಯನ್ನು ಮಾಡಲಾಗುವುದು ಎಂದು ಅವರು ಹೇಳಿದರು.





























 
 

ಪತ್ರಿಕಾಗೋಷ್ಠಿಯಲ್ಲಿ ಸಚಿವ ಎಸ್.ಅಂಗಾರ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top