ಕಾರು-ಸರಕಾರಿ ಬಸ್ ಮುಖಾಮುಖಿ ಡಿಕ್ಕಿ | ಕಾರಿನಲ್ಲಿದ್ದ ಆರು ಮಂದಿ ದುರ್ಮರಣ | ಇಬ್ಬರಿಗೆ ಗಂಭೀರ ಗಾಯ

ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ನಡೆದಿದೆ.

ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಮಕ್ಕಳು ಹಾಗೂ ಓರ್ವ ಗಂಡಸು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮಗು ಹಾಗೂ ಗಂಡಸು ಸಹಿತ ಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮೃತದೇಹಗಳನ್ನು  ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಅಪಘಾತಗೊಂಡ ಕಾರು ಮಂಡ್ಯ ಮೂಲದ್ದು ಎನ್ನಲಾಗಿದ್ದು. ಮೃತಪಟ್ಟವರ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಉಪಠಾಣೆಯಲ್ಲಿ ಘಟನೆ ಸಂಭವಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top