ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಸುಳ್ಯ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಮತ ಪ್ರಚಾರ ಕಾರ್ಯ ಶನಿವಾರ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಮಾತನಾಡಿ, ಭಾರತವನ್ನು ಪರಮ ವೈಭವವನ್ನು ಕಾಣುವ ನಿಟ್ಟಿನಲ್ಲಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ. ನಮ್ಮದು  ಕಾರ್ಯಕರ್ತರ ಪಕ್ಷ. ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ ಕ್ಷೇತ್ರ ಸುಳ್ಯ , ನಮ್ಮ ಅಭ್ಯರ್ಥಿಯನ್ನು 30ಸಾವಿರ ಮತಗಳ ಅಂತರರಿಂದ ಗೆಲ್ಲಿಸುವುದು ನಮ್ಮ ಗುರಿ ಎಂದು ಕರೆ ನೀಡಿದರು.

ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಾತನಾಡಿ, ನನ್ನನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿದಲ್ಲಿ ನಾನು ನ್ಯಾಯಯುತವಾದ ಕೆಲಸ ಕಾರ್ಯಗಳನ್ನು ಮಾಡುತ್ತನೆ ಎಂದು ಭರವಸೆ ನೀಡಿದರು.





























 
 

ಈ ಸಂದರ್ಭದಲ್ಲಿ ಬಿಜೆಪಿ  ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೆನಾಲ, ಜಿಲ್ಲಾ ರೈತ ಮೊರ್ಚಾ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ ಗುರುದತ್ ನಾಯಕ್, ಸುಳ್ಯ ಮಂಡಲ ಸಾಮಾಜಿಕ ಜಾಲಾತಾಣದ ಸಹ ಸಂಚಾಲಕ ಪ್ರಸಾದ್ ಕಾಟೂರು, ಪಕ್ಷದ ಮಹಾಶಕ್ತಿ ಕೇಂದ್ರ ಆಧ್ಯಕ್ಷ ಜಯರಾಜ್ ಕುಕ್ಕೆಟ್ಟಿ, ಪಂಚಾಯತ್ ರಾಜ್  ಜಿಲ್ಲಾ ಆಧ್ಯಕ್ಷ ಚನಿಯ ಕಲ್ತಡ್ಕ, ಗ್ರಾಮ ಪಂಚಾಯಿತಿ ಅಧ್ಯಕ್ಷರು ,ಮಹಿಳಾ ಪ್ರಮುಖಕರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ನ ವಿವಿಧ ಜವಾಬ್ದಾರಿ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top