ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45 ಗಂಟೆಗೆ ಹಾರಿಸ್ ಅವರು ಅಬ್ದುಲ್ ರಹಿಮಾನ್ ಇರುವ ಮನೆಗೆ ಹೋದಾಗ ಆತ ಮನೆಯಲ್ಲಿ ಎಲ್ಲೂ ಕಾಣದೇ ಇದ್ದದ್ದನ್ನು ಕಂಡು ರಹಿಮಾನ್ ನ ಮಾವ ಟಿ,ಎ.ಇಬ್ರಾಹಿಂ ಅವರಿಗೆ ತಿಳಿಸಿದ ಸಂದರ್ಭ ಹುಡುಕಾಡಿದಾಗ ಅವರು ಮನೆಯ ಹಿಂದೆಯಿರುವ ಸುಂದರ ನಾಯ್ಕ್ ರವರ ರಬ್ಬರ್ ತೋಟದಲ್ಲಿ ರಾತ್ರಿ 11.30 ಗಂಟೆಗೆ ರಬ್ಬರ್ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದ್ದರು ಎಂದು ಟಿ,ಎ.ಇಬ್ರಾಹಿಂ ತಿಳಿಸಿದರು. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top