ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗೆಲುವಿಗಾಗಿ ಎಲ್ಲರೂ ಶ್ರಮಿಸಿದ್ದಾರೆ. ಆದರೂ ಸೋಲಾಗಿದೆ. ಈ ಸೋಲು ತಾತ್ಕಾಲಿಕ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವವರೆಗೆ ನಾನು ವಿರಮಿಸುವುದಿಲ್ಲ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಹೇಳಿದರು.

ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ತಮ್ಮ ಅನಿಸಿಕೆ ಹಂಚಿಕೊಂಡರು. ಮುಂದೆ ಲೋಕಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ಇವೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲೇಬೇಕು. ಪುತ್ತೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸುವುದಿಲ್ಲ ಎಂದರು.

ಅನುಭವಿ ಆಶಾ ತಿಮ್ಮಪ್ಪ ಅವರು ಆಡಳಿತ ಮಾಡಿದವರು. ಅವರ ಗೆಲುವಿಗೆ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ರಾಜ್ಯ, ಕೇಂದ್ರದ ನಾಯಕರು ಬಂದು ಬೆಂಬಲ ನೀಡಿದ್ದಾರೆ. ರೋಡ್ ಶೋ ಮಾಡುವ ಮೂಲಕ ನಮಗೆ ಪ್ರೇರಣೆ ನೀಡಿದ್ದಾರೆ. ಮಾಧ್ಯಮದವರು ಸಹಕರಿಸಿದ್ದಾರೆ. ಕಚೇರಿಯನ್ನು ಸೀತಾರಾಮ ರೈ ನೀಡಿದ್ದಾರೆ. ಅವರಿಗೆಲ್ಲ ನಮ್ಮ ಕೃತಜ್ಞತೆಗಳು ಎಂದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top