ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ.

ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ.

ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಹೀಗೆ ನಾನಾ ಆಫರ್‍ಗಳನ್ನು ನೀಡುತ್ತಿದ್ದರು. ಇದರಲ್ಲಿ ಮೊದಲ ಭರವಸೆಯಾದ ವಿದ್ಯುತ್ ಬಿಲ್ ಇದೀಗ ಅಧಿಕಾರಿಗಳಿಗೆ ಹೊಸ ತಲೆ ನೋವು ತಂದಿದೆ.





























 
 

ಸರಕಾರ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ. ಸರಕಾರ ಅಸ್ತಿತ್ವಕ್ಕೆ ಬಾರದೇ, ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲಾಗದು. ಇದನ್ನು ಅಧಿಕಾರಿಗಳು ಗ್ರಾಮಸ್ಥರ ಗಮನಕ್ಕೆ ತಂದರೂ, ವಿದ್ಯುತ್ ಬಿಲ್ ಕಟ್ಟದೇ ಅಧಿಕಾರಿಗಳನ್ನೇ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top