ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ

ಸುಳ್ಯ: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕಳೆದ 6 ವರ್ಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದು, ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿದಾನದಲ್ಲಿ  ಅಂಗವೈಕಲ್ಯದಿಂದ ಬಲಳುತ್ತಿರುವ ಹರೀಶ್. ಕೆ ಎಂಬ ಚಿತ್ರಕಲಾವಿದನಿಗೆ ಸಹಾಯ ಧನವಾಗಿ 10200 ರೂ ಚೆಕ್ಕನ್ನು ಹಸ್ತಾಂತರಿಸಿದರು.

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಹಾಗೂ ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಸಂದರ್ಭದಲ್ಲಿ ಜಲ ಶ್ರೀ ಪ್ರತಿಷ್ಠಾನ ಕಡ್ಲಾರು ಅವರ ಸಹಕಾರದಲ್ಲಿ ಅಶಕ್ತ ಕಲಾವಿದರಿಗೆ ನೆರವಾಗಲು ನಡೆಸಿದ ನಿಧಿ ಸಂಗ್ರಹ ಅಭಿಯಾನದಲ್ಲಿ ಒಟ್ಟಾದ ಮೊತ್ತವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಯು.ಎಮ್. ಕಿಶೋರ್,ಟ್ರಸ್ಟಿನ  ಅಧ್ಯಕ್ಷ ಡಿ. ಎಸ್. ಒಡ್ಯ ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ, ಪತ್ರಕರ್ತ ತೇಜೇಶ್ವರ್, ಜಲಶ್ರೀ ಪ್ರತಿಷ್ಠಾನದ ನಿರಂಜನ್ ಕಡ್ಲಾರು, ಯುವ ಗಾಯಕಿ ಅಂಕಿತಾ ಆಚಾರ್ಯ ಕಡ್ಲಾರು, ಕಾಳಿಕಾಂಬಾ ಗೊಂಬೆ ಬಳಗದ ರಜನೀಶ್ ಬರಿಮಾರು, ಟ್ರಸ್ಟಿನ ಕಾರ್ಯದರ್ಶಿ ಮನೋಹರ್ ಪಲಯಮಜಲು ಉಪಸ್ಥಿತರಿದ್ದರು.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top