ಬ್ಯಾನರ್ ವಿಚಾರದಲ್ಲಿ ಯುವಕರ ಮೇಲೆ ಪೊಲೀಸ್  ದೌರ್ಜನ್ಯ | ಡಿವೈಎಸ್‍ ಪಿ ಡಾ.ವೀರಯ್ಯ ಹೀರೇಮಠ ನ್ಯಾಯಾಲಯಕ್ಕೆ ಶರಣು | ಜಾಮೀನಿನ ಮೇಲೆ ಬಿಡುಗಡೆ

ಪುತ್ತೂರು: ಚುನಾವಣೆ ಸಂದರ್ಭ ನಡೆದ  ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಎದುರಿಸುತ್ತಿರುವ ಡಿವೈಎಸ್‍ಪಿ ಡಾ.ವೀರಯ್ಯ ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣಾ ಎಸ್‍ಐ ಶ್ರೀನಾಥ್ ರೆಡ್ಡಿ ಮತ್ತು ಕಾನ್‍ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಈಗಾಗಲೇ ಅಮಾನತುಗೊಳಿಸಲಾಗಿದೆ.

ವಿಧಾನಸಭಾ ಚುನಾವಣೆ ಬಳಿಕ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಶ್ರದ್ಧಾಂಜಲಿ ಬರಹದೊಂದಿಗೆ ಬ್ಯಾನರ್ ಅಳವಡಿಸಿ,  ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್‍ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿದ್ದು, ಡಿವೈಎಸ್ ಪಿ ಡಾ.ವೀರಯ್ಯ ಹಿರೇಮಠ ಻ವರ ನೇತೃತ್ವದಲ್ಲೇ ದೌರ್ಜನ್ಯ ನಡೆಸಲಾಗಿತ್ತು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವಕರು ಆರೋಪಿಸಿದ್ದರು.



































 
 

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಡಿವೈಎಸ್ಪಿ ಸಹಿತ ಪೊಲೀಸರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಅದಂತೆ ಯುವಕ ಅವಿನಾಶ್ ಎಂಬಾತನ ತಂದೆ ವೇಣುನಾಐ ನರಿಮೊಗರು ಎಂಬವರು ನೀಡಿದ ದೂರಿನಂತೆ ಕಾನ್ ಸ್ಟೇಬಲ್ ಹರ್ಷಿತ್ ಅವರ ಮೇಲೆ 323, 324, 506/ಡಬ್ಲ್ಯೂ 34 ಐಪಿಸಿಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಸಂಬಂಧಿಸಿ ಆಗಿನ ಎಸ್‍ಐ ಶ್ರೀನಾಥ ರೆಡ್ಡಿ ಹಾಗೂ ಕಾನ್ ಸ್ಟೇಬಲ್ ಹರ್ಷಿತ್ ಅವರ ವಿರುದ್ಧ ವಿಚಾರಣೆಗೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು

ಡಿವೈಎಸ್ ಪಿ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಾಗ ಎಡಿಜಿಪಿ ಅಲೋಕ್ ಕುಮಾರ್ ಭರವಸೆ ನೀಡಿ, ಡಿವೈಎಸ್‍ ಪಿ ವೀರಯ್ಯ ಹಿರೇಮಠ ಅವರನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಲಾಗಿತ್ತು. ಇದೀಗ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top