ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕ ಜಯರಾಮ ಕೆ.ನಿಧನ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕ ಜಯರಾಮ ಕೆ.ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಪೆರ್ಲಂಪಾಡಿ ನಿವಾಸಿಯಾಗಿರುವ ಜಯರಾಮ ಕೆ.ಅವರು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖಾವ್ಯವಸ್ಥಾಪಕರಾಗಿದ್ದು, ಬಳಿಕ ಪೆರ್ಲಂಪಾಡಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಅಸೌಖ್ಯದಿಂದಿದ್ದ ಜಯರಾಮ ಅವರು ಆರೋಗ್ಯದಲ್ಲಿ ಚೇತರಿಕೆಗೊಂಡು ಕರ್ತವ್ಯದಲ್ಲಿದ್ದರು.ಬಳಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.



































 
 

ಸೌಮ್ಯಸ್ವಭಾವದ ವ್ಯಕ್ತಿತ್ವದ ಜಯರಾಮ ಕೆ.ಅವರು ಬ್ಯಾಂಕಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top