ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು

ಹಾಸನ : ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕ ಮೃತಪಟ್ಟ ಘಟನರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಹೆಕ್ಕಲು ಹೋಗಿದ್ದ ಸಂದರ್ಭ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಆದರೆ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.



































 
 

ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಆದರಾಗಲೇ ಆತ ಮೃತಪಟ್ಟಿದ್ದರು.

ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top