ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸವಣೂರು :  ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೆ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಇವರು ನೆರವೇರಿಸಿದರು.

ಬಳಿಕ ಮಾತನಾಡಿದ,ಸೀತಾರಾಮ ರೈ ಅವರು,ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯರಾಗಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.

ಮುಖ್ಯ ಅತಿಥಿ ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ರೈ ಅವರು ಮಾತನಾಡಿ ವಿದ್ಯಾರ್ಥಿ ಸಂಘಗಳು ನಾಯಕತ್ವವನ್ನು ಮೈಗೂಡಿಸಿಕೊಳ್ಳಲು ಅತ್ಯಂತ ಸಶಕ್ತವಾದ ವೇದಿಕೆಯಾಗಿದೆ,ನಾಯಕತ್ವ ಎಂದಾಗ ಬರಿಯ ರಾಜಕೀಯ ನಾಯಕತ್ವ ಮಾತ್ರವೇ ಅಲ್ಲ, ಬದಲಾಗಿ ಅದು ಸಮಗ್ರ ನಾಯಕತ್ವ ಆಗಿರಬೇಕು ಎಂದರು. 





































 
 

ವಿದ್ಯಾರಶ್ಮಿ  ಸಮೂಹ ಶಿಕ್ಣಸಂಸ್ಥೆಗಳಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

 ಈ ಸಂದರ್ಭದಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸ್ಪರ್ಷಾ ಜೆ. ಶೆಟ್ಟಿ ಮತ್ತು ಬಳಗ ಪ್ರಾರ್ಥಿಸಿದರು. ಆಯಿಷಾತ್ ಹನ್ನಾ ಸಂವಿಧಾನದ ಪೀಠಿಕೆ ವಾಚಿಸಿದರು.ವಿದ್ಯಾರ್ಥಿ ಸಂಘದ ಅಧ್ಯಕ್ಷ  ದೀಪಕ್ ಬಿ.ಎಂ. ವಂದಿಸಿದರು, ಕದೀಜತ್ ಅಝೀಲಾ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top