ಮಂಗಳೂರು: ದಕ್ಷಿಣ ಕನ್ನಡದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಕುಂದಾಪುರ ಹಾಗೂ ಹಾಲಶ್ರೀ ಸ್ವಾಮಿಜಿ ಬಂಧನವಾಗಿ ತಿಂಗಳು ಕಳೆದಿದೆ. ಇದೀಗ ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ಶ್ರೀಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಚೈತ್ರ ಇಡಿಗೆ ಬರೆದ ಪತ್ರದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಹಾಗೂ ಸಿಟಿ ರವಿ ಹೆಸರು ಉಲ್ಲೇಖ ಮಾಡಿದ್ದರು.
























