ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿ ನ. 12ರಂದು ಆರಂಭಗೊಂಡಿತು.

ಯಕ್ಷಗಾನ ಗುರು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್, ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿ ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ ಮಂಡಳಿಯ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ, ಸನತ್ ಬರಮೇಲು ಉಪಸ್ಥಿತರಿದ್ದರು.





























 
 

ಬಳಿಕ ಯಕ್ಷಗಾನ ಗುರು ಶಶಿಕುಮಾರ್ ಕಾವು ಅವರು ತರಬೇತಿ ಕಾರ್ಯಾಗಾರ ನಡೆಸಿದರು. ಪರಿಸರದ ಮಕ್ಕಳು ಭಾಗವಹಿಸಿದರು. ಮಂದಿರದ ಪದಾಧಿಕಾರಿಗಳು ಮತ್ತು  ಸದಸ್ಯರು ಸಹಕರಿಸಿದರು. ಇಲ್ಲಿನ  ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಹಾಗೂ ಹಳೆಗೇಟು ಶಿವಾಜಿ ಯುವ ವೃಂದ, ಶಿವಾಜಿ ಗೆಳೆಯರ ಬಳಗದ ಆಶ್ರಯದಲ್ಲಿ ಮುಖೇಶ್ ಬೆಟ್ಟಂಪಾಡಿ ಅವರ ಸಂಯೋಜನೆಯಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿ ಹಮ್ಮಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top