ನೆಲ್ಯಾಡಿ: ಆಕಸ್ಮಿಕ ಬೆಂಗಿ ತಗಲಿದ ಪರಿಣಾಮ ಸ್ಮೋಕ್ ಹೌಸ್ ಹಾಗೂ ಹಟ್ಟಿ ಸುಟ್ಟು ಭಸ್ಮವಾಗಿರುವ ಘಟನೆ ಇಚ್ಲಂಪಾಡಿ ನಿಡ್ಯಡ್ಕ ಎಂಬಲ್ಲಿ ನಡೆದಿದೆ.
ನಿಡ್ಯಡ್ಕ ನಿವಾಸಿ, ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ನಿರ್ದೇಶಕ ಜಾರ್ಜ್ ಕುಟ್ಟಿ ಉಪದೇಶಿ ಅವರಿಗೆ ಸೇರಿದ ಸ್ಮೋಕ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದೆ. ಪರಿಣಾಮ ಪಕ್ಕದ ಹಟ್ಟಿಗೂ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಈ ಸಂದರ್ಭದಲ್ಲಿ ಹಟ್ಟಿಯಲ್ಲಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ.
ಘಟನೆಯಿಂದ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸರ್ವೋತ್ತಮ ಗೌಡ, ಕೌಕ್ರಾಡಿ ಗ್ರಾಪಂ ಸದಸ್ಯೆ ಡೈಸಿ ವರ್ಗೀಸ್, ಮಾಜಿ ಸದಸ್ಯ ವರ್ಗೀಸ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ ಎನ್ನಲಾಗಿದೆ.
























