ಉಪ್ಪಿನಂಗಡಿ: ಅಯ್ಯೋಧ್ಯೆ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ಮನೆ-ಮನೆ ವಿತರಣಾ ಕಾರ್ಯಕ್ರಮ ಹಿರೇಬಂಡಾಡಿ ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ಸುಬ್ರಹ್ಮಣ್ಯ ದೇವರ ಮುಂದೆ ಪ್ರಾರ್ಥನೆ ನಡೆದು, ಬಳಿಕ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಹಿಂದೂವಿನ ಮನೆಗೂ ಈ ಮಂತ್ರಾಕ್ಷತೆ ತಲುಪಿ, ಶ್ರೀ ರಾಮನ ಪುಣ್ಯ ಕಾರ್ಯವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಇದೇ ಸಂದರ್ಭ ತಿಳಿಸಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಪ್ರಮುಖರು ಮನೆ ಮನೆ ಭೇಟಿ ನೀಡಿ ಮಂತ್ರಾಕ್ಷತೆ ವಿತರಿಸಿದರು.
























