ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..!

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೇಷ್ಟಾ’ ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಪಂಜಾಬಿ ಲಸ್ಸಿ ಸಂಸ್ಥೆಯ ವತಿಯಿಂದ ಐದು ದಿನದಲ್ಲಿ ಬಂದ ಲಾಭದ ಹಣವನ್ನು ಕ್ಯಾನ್ಸರ್ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಐದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹಸ್ತಾಂತರಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಎಲ್ಲಾ ಕಷ್ಟಗಳನ್ನು ನೀಗಿಸಲು ದೇವರು ಶಕ್ತಿ ನೀಡಲಿ. ಮುಂದೆಯೂ ಸಂಸ್ಥೆಯಿಂದ ಉತ್ತಮ ಸಮಾಜ ಮುಖಿ ಕೆಲಸ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಭಾಪತಿ ಯು. ಟಿ. ಖಾದರ್, ಸ್ಥಳೀಯ ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ರವಿ ಶಂಕರ್ ಮಿಜಾರ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ ಗಿರಿಧರ್ ಶೆಟ್ಟಿ, ರಣದೀಪ್ ಕಾಂಚನ್,





























 
 

ಜೋಸೆಫ್ ಕ್ರಾಸ್ತ ಮಾರ್ಟೀನ್, ಮತ್ತಿತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top