ಕಾಣಿಯೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘ ಕಾಣಿಯೂರು ಶಾಖಾ ವತಿಯಿಂದ ಸವಣೂರು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ನಿರ್ದೇಶಕಿ ಜ್ಞಾನೇಶ್ವರಿ ಅವರಿಗೆ ಸನ್ಮಾನ ಕಾರ್ಯಕ್ರಮ ಕಾಣಿಯೂರು ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಕಾಣಿಯೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಗೌಡ ಯು.ಪಿ., ನಿರ್ದೇಶಕರಾದ ರಾಮಕೃಷ್ಣ ಗೌಡ ಕೆ., ಪ್ರವೀಣ್ ಕುಂಟ್ಯಾನ, ಸಲಹಾ ಸಮಿತಿ ಸದಸ್ಯರಾದ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಎಂ.ಎನ್.ಗೌಡ, ಚಂದ್ರಶೇಖರ ಗೌಡ, ನಾಗೇಶ್ ಕೆಡೆಂಜಿ, ವಿಶ್ವನಾಥ ಗೌಡ ಅಂಬುಲ, ಶೇಷಪ್ಪ ಗೌಡ ಅಬೀರ, ಸೇಸಪ್ಪ ಗೌಡ ಐ., ಶೂರಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ., ಶಾಖಾ ಪ್ರಬಂಧಕರು, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
























