ಸುಳ್ಯ: ಸುಳ್ಯ ಬಿಜೆಪಿ ನೂತನ ಮಂಡಲ ಸಮಿತಿ ವಿಚಾರದಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರು ಕಚೇರಿಗೆ ಬೀಗ ಜಡಿದ ಘಟನೆ ಭಾನುವಾರ ನಡೆದಿದೆ.
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಮಹಾಶಕ್ತಿ ಕೇಂದ್ರದವರು ಸಭೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ ಜಡಿದಿದ್ದಾರೆ ಎನ್ನಲಾಗಿದೆ.
ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಂಟಾದ ಅಸಮಾಧಾನ ಸರಿಡಪಡಿಸುವ ತನಕ ಮಂಡಲ ಸಮಿತಿ ಯಾವುದೇ ಚಟುವಟಿಕೆಗಳನ್ನು ನಡೆಸುವುದಿಲ್ಲ ಎಂದು ಪ್ರಮುಖರು ಸಭೆಯಲ್ಲಿ ನಿರ್ಧರಿಸಿದ್ದಾರೆ.
























