ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು

ಬಂಟ್ವಾಳ: ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.

ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದಾತ.

ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿರುವ ಆತ ಸೂಕ್ತ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.





























 
 

ಸೋಮವಾರ ದ್ವಿಚಕ್ರದಲ್ಲಿ ಬಂದಾತ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಸ್ಥಳೀಯ ನಿವಾಸಿಗಳಾದ  ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್, ತಸ್ಲಿಂ, ಮುಖ್ತಾರ್, ಪಿ.ಎಂ.ಆರೀಫ್ ಎಂಬವರು ಗಮನಿಸಿ ಆತ್ಮಹತ್ಯೆ ಯತ್ನವನ್ನು ಮೊಟಕುಗೊಳಿಸಿ ಪಾರು ಮಾಡಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೊಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top