ನಳೀಲು: ಶ್ರೀ ಸುಬ್ರಹ್ಮಣ್ಯ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಗುರುವಾರ ಬ್ರಹ್ಮಕಲಶಾಭಿಷೇಕ ನಡೆಯಿತು.

ಬೆಳಿಗ್ಗೆ ಮಹಾಗಣಪತಿಗೆ ಹೋಮ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹಕಲಶಾಭಿಷೇಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಮಧ್ಯಾಹ್ನ ಮಹಾಪೂಜೆ ಬಳಿಕ ಭೂತ ಬಲಿ, ವೈದಿಕ ಮಂತ್ರಾಕ್ಷತೆ ಹಾಗೂ ಪ್ರಸಾದ ವಿತರಣೆ ನಡೆಯಿತು.





























 
 

ಬೆಳಂದೂರು ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಮುಂಬಯಿ ಕಾರ್ದಾಂಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧಮ೯ದಶಿ೯ ಪುರುಷೋತ್ತಮ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಉಪಾಧ್ಯಕ್ಷ ವಿಲಾಸ್ ರೈ ಪಾಲ್ತಾಡು, ನಾರಾಯಣ ರೈ ಮೊದೆಲ್ಮಾಡಿ, ಚಂದ್ರಶೇಖರ ರೈ ನಳೀಲು, ವಿನೋದ್ ರೈ ಪಾಲ್ತಾಡು, ಕಿಶೋರ್ ಕುಮಾರ್ ರೈ ನಳೀಲು, ಸಂಜೀವ ಗೌಡ ಪಾಲ್ತಾಡಿ, ರಘುನಾಥ ರೈ ನಡುಕೂಟೇಲು, ಪ್ರಧಾನ ಕಾರ್ಯದರ್ಶಿ ಸುರೇಶ್ಚಂದ್ರ ರೈ ಪಾಲ್ತಾಡಿ, ಕಾರ್ಯದರ್ಶಿ ಪ್ರವೀಣ್ ಕುಮಾರ್ ರೈ ನಳೀಲು, ಜತೆ ಕಾರ್ಯದರ್ಶಿ ಡಾ. ಶುಭ್ ದೀಪ್ ರೈ ಕೋಲ್ಪೆಗುತ್ತು, ಖಜಾಂಚಿ ಡಾ. ಸುಚೇತಾ ಜೆ. ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾ‌ರ್ ರೈ ನಳೀಲು, ಪ್ರಧಾನ ಕಾರ್ಯದರ್ಶಿ ಸತೀಶ್ ರೈ ನಳೀಲು, ಖಜಾಂಚಿ ಮೋಹನ್ ದಾಸ್ ರೈ ನಳೀಲು ಮುಂತಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top