ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸುಳ್ಯ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ ಅಂಗವಾಗಿ ಸೊಸೈಟಿಯ ಸಹ ಸಂಸ್ಥೆಯಾದ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ 2 ನೂತನ ಕೊಠಡಿಗಳಿಗೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ ಫೆ.24 ಶನಿವಾರ ಬೆಳಗ್ಗೆ 8.30 ರಿಂದ ಕೊಡಿಯಾಲಬೈಲು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಇತರ ಸಹಕಾರಿ ಸಂಘ, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ- ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ನಡೆಯುವ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ. ಸಿ. ಜಯರಾಮ ವಹಿಸಲಿದ್ದು, ಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಉದ್ಘಾಟಿಸಲಿದ್ದಾರೆ.

23 ಶಾಖೆಗಳನ್ನು ಹೊಂದಿರುವ ಸಂಸ್ಥೆಯಲ್ಲಿ 19,270 ಸದಸ್ಯರಿದ್ದಾರೆ.





























 
 

ಮುಖ್ಯ ಅತಿಥಿಗಳಾಗಿ ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಮಾಣಿಬೆಟ್ಟು, ಸುಳ್ಯ ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ ಚಂದ್ರಾ ಕೋಲ್ಚಾರು ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಟಿ. ವಿಶ್ವನಾಥ, ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ಶಾಲಾ ಸಂಚಾಲಕ ದೊಡ್ಡಣ್ಣ ಬರಮೇಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top