ರಾಮಾಯಣ, ಮಹಾಭಾರತ ಪರೀಕ್ಷೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಪುತ್ತೂರು : ಬೆಂಗಳೂರು ಭಾರತ ಸಂಸ್ಕೃತಿ ಪ್ರತಿಷ್ಠಾನದವರು 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8 ವಿದ್ಯಾರ್ಥಿಗಳಿಗೆ ವಿಶಿಷ್ಠ ಶ್ರೇಣಿಯೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.

2023-24 ರಲ್ಲಿ ಸಂಘಟಿಸಲಾದ ಪರೀಕ್ಷೆಗಳಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 450 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ರಾಮಾಯಣ ವಿಭಾಗದಲ್ಲಿ ಎಂಟನೆಯ ತರಗತಿಯ ಅಪೇಕ್ಷಾ ಎನ್., ಸಾನ್ವಿ ಎಸ್. ಪ್ರಭು, ಅವನಿ ಘಾಟೆ, ಮತ್ತು ಸಾನ್ವಿಕಾ ಎಸ್. ಹಾಗೂ ಮಹಾಭಾರತ ಪರೀಕ್ಷೆಯಲ್ಲಿ 9ನೇ ತರಗತಿಯ ಸಾನ್ವಿಕಾ ಎಸ್. ರೈ, ಪ್ರಣವ ಕೃಷ್ಣ, ಆದೀಶ್ ಜೈನ್, ಮತ್ತು ತೇಜಸ್ ಕೆ. ಆರ್.  ಇವರು ಚಿನ್ನದ ಪದಕಕ್ಕೆ ಭಾಜನರಾದ ವಿದ್ಯಾರ್ಥಿಗಳು ಎಂದು ಶಾಲಾ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top