ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆಯಾಗಿದ್ದಾರೆ.

ಬೂತ್ ಅಧ್ಯಕ್ಷರಿಂದ ಮಂಡಲ ಮಟ್ಟದವರೆಗೆ ವಿವಿಧ ಜವಾಬ್ದಾರಿ  ನಿರ್ವಹಿಸಿದ ಇವರು ಬೂತ್ ಅಧ್ಯಕ್ಷರಾಗಿ, ಬಜತ್ತೂರು ಗ್ರಾಮ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು  ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಬಿಜೆಪಿ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ.

ಸ್ಥಳಿಯ ಯುವಕ ಮಂಡಲ, ಭಜನಾ ಮಂಡಳಿ, ದೇವಸ್ಥಾನಗಳಲ್ಲಿ ಪ್ರಮುಖರಾಗಿ ಕೆಲಸ ಮಾಡಿದ್ದಾರೆ. ಸ್ಥಳೀಯ ಪ್ರಾಥಮಿಕ ಶಾಲಾ ಹಾಗೂ ಹೈಸ್ಕೂಲ್ ಸಮಿತಿ ಅಧ್ಯಕ್ಷರಾಗಿ ಮತ್ತು ಉಪ್ಪಿನಂಗಡಿ ಜೂನಿಯರ್ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿ  ಸೇವೆ ಸಲ್ಲಿಸಿದ್ದಾರೆ.





























 
 

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಡಿ ವಿ ಸದಾನಂದ ಗೌಡ, ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್, ಸಂಜೀವ ಮಠಂದೂರು ಭಾರತೀಯ ಜನತಾ ಪಾರ್ಟಿ ಯಿಂದ ವಿಧಾನಸಭಾ ಸದಸ್ಯರಾಗಲು ತನ್ನ ಸೇವೆ ಸಲ್ಲಿಸಿರುವ ಮುಕುಂದ ಬಜತ್ತೂರವರು ಪ್ರಾಮಾಣಿಕವಾಗಿ ಹಾಗೂ ಪಕ್ಷ ನಿಷ್ಠರಾಗಿ ತಳಮಟ್ಟದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top