ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ ಸಾಮೆತ್ತಡ್ಕ ಶಾಲೆಯಲ್ಲಿ ನಡೆಯಿತು.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ, ಜೆ.ಸಿ.ಐ ಪುತ್ತೂರು ಮತ್ತು ಸಾಮೆತ್ತಡ್ಕ “ನಮ್ಮ ಶಾಲೆ”ಸ. ಹಿ. ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಾಗಾರವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್‌ ದೀಪ ಬೆಳಗಿಸಿ ಚಾಲನೆ ನೀಡಿದರು.

ಜೆಸಿಐ ಅಧ್ಯಕ್ಷ ಮೋಹನ್ ಕೆ ಮುಖ್ಯ ಅತಿಥಿಯಾಗಿ ಶುಭ ಕೋರಿದರು. ಜೆಸಿಐ ತರಬೇತಿ ವಿಭಾಗದ ಉಪಾಧ್ಯಕ್ಷ, ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯಶ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟು, ಶಾಲಾಭಿವೃದ್ಧಿ ಸಮಿತಿಯ ಜವಾಬ್ದಾರಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ಹಾಗೂ ಪೋಷಕರು ಪ್ರಾಥಮಿಕ ಹಂತದಲ್ಲಿ ತಮ್ಮ ಮಕ್ಕಳ ಬಗ್ಗೆ ಹೇಗೆ ಗಮನ ವಹಿಸಬೇಕು ಎಂಬುದರ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.





























 
 

ವಿದ್ಯಾಭಿಮಾನಿ ದಿನೇಶ್ ಕಾಮತ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪವಿತ್ರ, ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್‌ ಟ್ರಸ್ಟ್ ಕಾರ್ಯದರ್ಶಿ ಇಂದಿವ‌ರ್ ಭಟ್, ಅಂಗನವಾಡಿ ಶಿಕ್ಷಕಿ ಹೇಮಾವತಿ ಉಪಸ್ಥಿತರಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಜ್, ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು, ಮಕ್ಕಳ ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top