ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಜನ ಸಂಪರ್ಕ ಅಭಿಯಾನ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ನಡೆಯಿತು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಮಹಿಳೆಯರಲ್ಲಿ ಉಳಿತಾಯ ಮನೋಭಾವನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ಪುತ್ತೂರಿನ ಮುಳಿಯ ಜ್ಯುವೆಲರ್ಸ್ ಸಹಯೋಗದೊಂದಿಗೆ ಜನ ಸಂಪರ್ಕ ಅಭಿಯಾನವನ್ನು ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಏರ್ಪಡಿಸಲಾಯಿತು.

ಮುಳಿಯ ಜ್ಯುವೆಲ್ಲರ್ಸ್ ನ ನೂರಕ್ಕೂ ಹೆಚ್ಚು ಮಂದಿ ಸಿಬ್ಬಂದಿಗಳು ಅಂಚೆ ಇಲಾಖೆಯ ವಿವಿಧ ಸೇವೆಗಳ ಖಾತೆಗಳನ್ನು ತೆರೆಯುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಪ್ರಧಾನ ಅಂಚೆ ಕಛೇರಿಯ ಆವರಣದಲ್ಲಿ ಹದಿನೈದು ಮಂದಿ ಪುತ್ತೂರು ನಗರ ಸಭಾ ವ್ಯಾಪ್ತಿಯ ಮಹಿಳಾ ಸ್ವಚ್ಛತಾ ಕಾರ್ಮಿಕರನ್ನು ಗುರುತಿಸಿ ಶಾಲುಹೊದಿಸಿ ನೆನೆಪಿನ ಕಾಣಿಕೆಗಳನ್ನಿತ್ತು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳಿಯ ಜ್ಯುವೆಲ್ಸ್ ನಿರ್ದೇಶಕಿ ಅಶ್ವಿನಿ ಕೃಷ್ಣ, ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್, ಉಪ ಅಂಚೆ ಅಧೀಕ್ಷಕಿ ಉಷಾ ಕೆ ಆರ್, ಸಹಾಯಕ ಅಂಚೆ ಅಧೀಕ್ಷಕ ಗಣಪತಿ ಮರಡಿ, ಪುತ್ತೂರು ಪ್ರಧಾನ ಅಂಚೆ ಕಛೇರಿ ಅಂಚೆಪಾಲಕ ತೀರ್ಥಪ್ರಸಾದ್  ಎಸ್., ಮಹಿಳಾ ಪೊಲೀಸ್ ಠಾಣೆಯ ಸವಿತಾ ಪಾಲ್ಗೊಂಡಿದ್ದರು.





























 
 

ಪುತ್ತೂರು ಅಂಚೆ ವಿಭಾಗದ ಮಾರುಕಟ್ಟೆ ಅಧಿಕಾರಿ ಗುರುಪ್ರಸಾದ್ ಕೆ. ಎಸ್. ಕಾರ್ಯಕ್ರಮವನ್ನು ನಿರೂಪಿಸಿದರು. ಮುಳಿಯ ಜ್ಯುವೆಲ್ಸ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸಂಜೀವ ವಂದಿಸಿದರು. ಅಂಚೆ ಕಚೇರಿಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top