ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ, ಸಮಾಜ ಸೇವಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿಯಾಗಿರುವ ಸುಧಾ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಭಾರತದ ರಾಷ್ಟ್ರಪತಿಗಳು ಈ ನಿರ್ಧಾರ ಕೈಗೊಂಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ ಎಂದು ಮೋದಿಯವರು ಟ್ವಿಟರ್‍ ನಲ್ಲಿ ನಮೂದಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top