ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟ | ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎನ್‍ ಐ ಎ ವಶ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ಓರ್ವನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್‍ ಎಂಬಾತನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ಸ್ಪೋಟದ ನಂತರ ಬಾಂಬರ್ ಬೆಂಗಳೂರಿನಿಂದ ಬೀದರ್ ಬಸ್ಸಿನಲ್ಲಿ ತೆರಳಿ ಭಟ್ಕಳ ಕಡೆಗೆ ಹೋಗಿದ್ದಾನೆ ಎಂಬ ಶಂಕೆ ಸಿಸಿಟಿವಿ ಪೂಟೇಜ್‍ ಮೂಲಕ ವ್ಯಕ್ತವಾಗಿದ್ದು, ಉಗ್ರನ ಪತ್ತೆಗೆ ತನಿಖೆಗೆ ತೀವ್ರಗೊಳಿಸಲಾಗಿದೆ.





























 
 

ಮಿನಾಜ್ ಅಲಿಯಾಸ್ ಸುಲೇಮಾನ್ ನ ಕೈವಾಡ ಈ ಬಾಂಬ್‍ ಸ್ಪೋಟದಲ್ಲಿ ಇರುವ ಶಂಕೆ ವ್ಯಕ್ತವಾಗಿದ್ದು ಆತನನ್ನು ನ್ಯಾಯಾಲಯ ಮಾ.9 ರ ತನಕ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top