ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ರಾಘವ ಎಚ್. ಗೇರುಕಟ್ಟೆ ನೇಮಕಗೊಂಡಿದ್ದಾರೆ.
ರಾಘವ ಅವರು ನಾಳ ಶ್ರೀ ದುರ್ಗಾಪರಮೇಶ್ವರಿ ಚಿಕ್ಕಮೇಳದ ಸಂಚಾಲಕರಾಗಿ ಮತ್ತು ನಾಳ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕರಾಗಿ ಯಕ್ಷಗಾನ ಮತ್ತು ತಾಳಮದ್ದಳೆಯ ಸಂಯೋಜಕರಾಗಿ, ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಮತ್ತು ಉಪ್ಪಿನಂಗಡಿಯ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಅಭಿನಂದನೆ ಸಲ್ಲಿಸಿದ್ದಾರೆ.
























