ಅಂಗನವಾಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಳ್ಳರು | ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ಕಾಲ್ಕಿತ್ತ ಕಳ್ಳರು

ಪುತ್ತೂರು: ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು, ಪಾತ್ರೆಗಳನ್ನು ಬೆಂಕಿಯಲ್ಲಿ ಕರಟಿದ್ದಾರೆ. ಬಿಸಿಯೂಟದ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಟಾಯ್ಲೆಟ್ ಬೇಸಿನ್‍ ಗೆ ಮಣ್ಣು ತುಂಬಿಸಿ ಹೋಗಿದ್ದಾರೆ ಎನ್ನಲಾಗಿದೆ.

ಅಷ್ಟಕ್ಕೂ ಬಿಡದ ಕಳ್ಳರು ಪ್ರಾಥಮಿಕ ಆರೋಗ್ಯ ಕೇಂದ್ರ, ಪಕ್ಕದಲ್ಲಿರುವ ಬಿಆರ್ ಸಿ ಕೇಂದ್ರದ ಬೀಗ ಒಡೆದು ಚಿಲ್ಲರೆ ಹಣ ಕದ್ದೊಯ್ದ ಘಟನೆಯೂ ನಡೆದಿದೆ.





























 
 

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top